December 16, 2025

ಮಂಗಳೂರು: ನಾಯಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಸ್ಕೂಟರ್: ಸವಾರ ಮೃತ್ಯು

0
IMG-20230623-WA0039.jpg

ಮಂಗಳೂರು: ನಾಯಿ ಅಡ್ಡದಾಟಿದ ಪರಿಣಾಮ ಆಯತಪ್ಪಿದ ಸ್ಕೂಟರ್ ಸವಾರ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟ ಘಟನೆ ಯೆಯ್ಯಾಡಿ ಸಮೀಪದ ಶರ್ಬತ್ ಕಟ್ಟೆ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಮರೋಳಿ ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67) ಮೃತರು.

ಬೆಳಿಗ್ಗೆ ಮನೆಯಿಂದ ಯೆಯ್ಯಾಡಿ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ನಾಯಿಯೊಂದು ಅಡ್ಡದಾಟಿದೆ. ನಿಯಂತ್ರಣ ತಪ್ಪಿ ಅವರು ನಾಯಿಗೆ ಢಿಕ್ಕಿ ಹೊಡೆದು ಡಿವೈಡರ್ ತಲೆಗೆ ಬಡಿದು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ತಕ್ಷಣ ಎ.ಜೆ ಆಸ್ಪತ್ರೆಗೆ ದಾಖಲಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

ಸಂಸ್ಥೆಯೊಂದರ ಡೀಲರ್‍ಶಿಪ್ ಪಡೆದುಕೊಂಡು ವ್ಯವಹಾರ ನಿರ್ವಹಿಸುತ್ತಿದ್ದ ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!