December 15, 2025

ಬೆಳ್ತಂಗಡಿ : ಶಿವಮೊಗ್ಗದ ಅವಿವಾಹಿತ ಯುವಕ ಲಾಡ್ಜ್ ನ ರೂಂನಲ್ಲಿ ಆತ್ಮಹತ್ಯೆಗೆ ಶರಣು

0
IMG-20230629-WA0040.jpg

ಬೆಳ್ತಂಗಡಿ : ಶಿವಮೊಗ್ಗದ ಅವಿವಾಹಿತ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಖಾಸಗಿ ಲಾಡ್ಜ್ ನ ರೂಂನಲ್ಲಿ ನಡೆದಿದೆ.

ಜೂನ್ 26 ರಂದು ಶಿವಮೊಗ್ಗ ಜಿಲ್ಲೆಯ ಅವಿವಾಹಿತ ಯುವಕ ಕಾರ್ತಿಕ್ (29) ಎಂಬಾತ ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ರೂಂ ಬುಕ್ ಮಾಡಿ ರೂಂ ಪಡೆದುಕೊಂಡು ಉಳಿದುಕೊಂಡಿದ್ದು. ಜೂನ್ 28 ರಂದು ರೂಂ ಒಳಗೆ ಹಗ್ಗವನ್ನು ಪ್ಯಾನ್ ಗೆ ಹಾಕಿ ಪ್ಲಾಸ್ಟಿಕ್ ಚೆಯರ್ ನಲ್ಲಿ ನಿಂತುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಜೂನ್ 29 (ಇಂದು) ರೂಂ ನಿಂದ ಕಾರ್ತಿಕ್ ಹೊರಬಾರದೆ ಇದ್ದಾಗ ಲಾಡ್ಜ್ ಸಿಬ್ಬಂದಿ ಬಾಗಿಲು ಎಷ್ಟೇ ಬಡಿದ್ದಾರೆ. ಆದರೆ ಒಳಗಡೆಯಿಂದ ಮಾತನಾಡದೇ ಇದ್ದಾಗ ಅನುಮಾನದಿಂದ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು. ಅದರಂತೆ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಆನಂದ್ ಮತ್ತು ತಂಡ ಲಾಡ್ಜ್ ಗೆ ತೆರಳಿ ಬಾಗಿಲು ಮುರಿದು ಒಳಹೋದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ಕಾರ್ತಿಕ್ ಮನೆಯ ವಿಳಾಸ ಪತ್ತೆಯಾಗಿದ್ದು ಮನೆಯವರನ್ನು ಬೆಳ್ತಂಗಡಿ ಪೊಲೀಸರು ಸಂಪರ್ಕಿಸಿದ್ದು. ಸಂಜೆ ವೇಳೆಗೆ ಕಾರ್ತಿಕ್ ಮನೆಯವರು ಪೊಲೀಸ್ ಠಾಣೆಗೆ ತಲುಪಲಿದ್ದಾರೆ. ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!