December 15, 2025

ಕುಂದಾಪುರ: ಚಿರತೆ ದಾಳಿ: ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

0
IMG-20230630-WA0020.jpg

ಕುಂದಾಪುರ: ಕೊಲ್ಲೂರು ಸಮೀಪದ ನಾಗೋಡಿ (ನಿಟ್ಟೂರು) ಘಾಟಿಯ ಕಂಚಿಕೆರೆ ಎಂಬಲ್ಲಿ ತಡರಾತ್ರಿ ಚಿರತೆಯೊಂದು ದಾಳಿ ನಡೆಸಿ ವ್ಯಕ್ತಿಯನ್ನು ಗಂಭೀರ ಗಾಯಗೊಳಿಸಿರುವ ಘಟನೆ ನಡೆದಿದೆ.

ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಗಾಢ ನಿದ್ರೆಯಲ್ಲಿದ್ದ ಮನೆ ಮಂದಿ ಸಾಕು ನಾಯಿ ಕೂಗಾಟವನ್ನು ಕೇಳಿ ಎಚ್ಚೆತ್ತಿದ್ದಾರೆ. ಮನೆ ಯಜಮಾನ ಗಣೇಶ್ (48) ಬಾಗಿಲು ತೆರೆದು ಹೊರ ಬಂದಾಗ ಅವರ ಮೇಲೆ ಚಿರತೆ ಎರಗಿದೆ. ಅವರು ಗಂಭೀರ ಗಾಯಗೊಂಡಿದ್ದಾರೆ. ಮನೆಯವರ ಕೂಗಾಟಕ್ಕೆ ಅಕ್ಕಪಕ್ಕದವರು ಓಡಿ ಬಂದಾಗ ಚಿರತೆ ಅಲ್ಲಿಂದ ಕಾಲ್ಕಿತ್ತಿದೆ.

ಗುರುವಾರ ಬೆಳಗ್ಗೆ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಕಾಂಬಿಕಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವ ಕಂಚಿಕೆರೆ ಪ್ರದೇಶದಲ್ಲಿ ಚಿರತೆ ದಾಳಿ ಕಳವಳ ಮೂಡಿಸಿದೆ. ನಾಗೋಡಿ ಚೆಕ್‌ಪೋಸ್ಟ್‌ನಿಂದ ಅಂದಾಜು 4 ಕಿಮೀ ದೂರದಲ್ಲಿ ಈ ಊರಿದ್ದು, ಸಿಗಂಧೂರಿಗೆ ಹೋಗುವ ಮಾರ್ಗ ಬದಿಯಲ್ಲಿದೆ. ತಡರಾತ್ರಿ 2 ಗಂಟೆ ವೇಳೆಗೆ ನಾಯಿ ಕೂಗಿಕೊಳ್ಳುವುದನ್ನು ಕೇಳಿ ಗಣೇಶ್ ಬಾಗಿಲು ತೆಗೆದು ಹೊರಬಂದಾಗ ಏಕಾಏಕಿ ಅವರ ಮೇಲೆ ಚಿರತೆ ಎರಗಿದೆ.

Leave a Reply

Your email address will not be published. Required fields are marked *

error: Content is protected !!