September 8, 2024

ಮಂಗಳೂರು: ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರಿಗೆ ಪ್ರಮಾಣ ಮಾಡಲು ಬನ್ನಿ: ಮಹೇಶ್ ಶೆಟ್ಟಿ ತಿಮರೋಡಿ ಬಳಗಕ್ಕೆ ಧೀರಜ್ ಜೈನ್ ಆಹ್ವಾನ

0

ಮಂಗಳೂರು: ಬೆಳ್ತಂಗಡಿಯ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ವಿರುದ್ದ ಸುಳ್ಳು ಆರೋಪ ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಬಳಗ ಕಾನತ್ತೂರು ಕ್ಷೇತ್ರಕ್ಕೆ 10 ದಿನದೊಳಗೆ ಪ್ರಮಾಣಕ್ಕೆ ಬರಲಿ ಎಂದು ಧೀರಜ್ ಜೈನ್ ಆಹ್ವಾನ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹೇಶ್ ಶೆಟ್ಟಿ ತಿಮರೋಡಿ ಅವರೇ ಯಾವ ದಿನ ಅಂತ ಹೇಳಲಿ, ನಾವು ದೈವದ ಸಮ್ಮುಖದಲ್ಲಿ ಸೌಜನ್ಯ ಕೊಲೆ ಪ್ರಕರಣದಲ್ಲಿ ನಮ್ಮ ಪಾತ್ರ ಇಲ್ಲ ಎಂದು ಪ್ರಮಾಣ ಮಾಡುತ್ತೇವೆ ಎಂದರು.

ಮಾಜಿ ಸಚಿವ ಅಭಯಚಂದ್ರಜೈನ್ ಮಾತನಾಡಿ, ಬೆಳ್ತಂಗಡಿಯ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ ಬಳಿಕವೂ ಕೆಲವರು ಧರ್ಮಸ್ಥಳ ಕ್ಷೇತ್ರ ಹಾಗೂ ಜೈನ ಸಮುದಾಯದ ವಿರುದ್ಧ ಆರೋಪ ಮಾಡುತ್ತಿರುವುದನ್ನು ಖಂಡಿಸುತ್ತೇವೆ. ಜೈನ ಸಮಾಜದ ವಿರುದ್ಧ ಮಾಡುತ್ತಿರುವ ದಾಳಿಯನ್ನು ಸಹಿಸುವುದಿಲ್ಲ. ಅಗತ್ಯ ಬಿದ್ದರೆ ಕಾನೂನು ಹೋರಾಟ ಕೂಡ ಮಾಡುತ್ತೇವೆ ಎಂದರು.

ಇನ್ನು ಸುದ್ದಿಗೋಷ್ಠಿಯಲ್ಲಿ ಮಲ್ಲಿಕ್ ಜೈನ್, ಉದಯ ಜೈನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!