ಕಾರವಾರ: ಆನ್ ಲೈನ್ ಗೇಮ್ ಚಟದಿಂದಾಗಿ ಲಕ್ಷಾಂತರ ರೂ. ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ
ಕಾರವಾರ: ಆನ್ ಲೈನ್ ಗೇಮ್ ಚಟದಿಂದಾಗಿ ಲಕ್ಷಾಂತರ ರೂ. ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡದಲ್ಲಿ ನಡೆದಿದೆ.
ವಿಜೇತ್ ಶಾಂತಾರಾಮ ಹೆಗಡೆ (37) ಎಂಬಾತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಘಟನೆ ಶಿರಸಿ ತಾಲೂಕಿನ ಕುಳವೆ ಬಳಿ ನಡೆದಿದೆ.
ಶುಕ್ರವಾರ ಮನೆಯಿಂದ ಬೆಂಗಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದ ಯುವಕ ಮತ್ತೆ ಮನೆಗೆ ವಾಪಸ್ಸಾಗಿಲ್ಲ. ಆ ಬಳಿಕ ಡೆತ್ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ.




