ಹಾಡಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನ ಬರ್ಬರ ಹತ್ಯೆ
ಹಾಸನ: ಚನ್ನರಾಯಪಟ್ಟಣ ತಾಲೂಕಿನ ಹೊನ್ನಮಾರನಹಳ್ಳಿಯ ನಟೋರಿಯಸ್ ರೌಡಿಶೀಟರ್ ಮಾಸ್ತಿಗೌಡ ಅಲಿಯಾಸ್ ಕೃಷ್ಣ ಎಂಬಾತನನ್ನು ಹಾಡುಹಗಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪಟ್ಟಣದ ಬಿಎಂ ರಸ್ತೆಯಲಿರುವ ಧನಲಕ್ಷ್ಮೀ ಚಿತ್ರಮಂದಿರದ ಮುಂಭಾಗದಲ್ಲಿ ಇನ್ನೋವಾ ಕಾರಿನಲ್ಲಿ ಬಂದ ನಾಲ್ಕೈದು ದುಷ್ಕರ್ಮಿಗಳ ತಂಡ ಮಾಸ್ತಿಗೌಡನನ್ನು ಹತ್ಯೆ ಮಾಡಿ ಪರಾರಿಯಾಗಿದೆ.
ಮಾಸ್ತಿಗೌಡ ಕಾನೂನು ಬಾಹಿರ ಚಟುವಟಿಕೆ ಆರೋಪದಡಿ ಗಡಿಪಾರಾಗಿ ಸದ್ಯ ಕಲಬುರಗಿ ಜೈಲಿನಲ್ಲಿರುವ ಮತ್ತೊಬ್ಬ ರೌಡಿ ಶೀಟರ್ ಯಾಚೇನಹಳ್ಳಿ ಚೇತುವಿನ ಮಾಜಿ ಶಿಷ್ಯನಾಗಿದ್ದು ಈತ ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದನು.




