December 19, 2025

ತಮ್ಮನ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆ ಮಾಡಿಕೊಂಡ ಅಕ್ಕ

0
n33634976216379973862881699aaf49a55fe4773b7ec1f517ba1980b245350eed3c7c7d9600dfc6105024e.jpg

ಹಾವೇರಿ: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ಯಾಡಗಿಯಲ್ಲಿ ನಡೆದಿದೆ. 16 ವರ್ಷದ ನಾಗರಾಜ್ ಚಲಾವದಿ ಮತ್ತು 18 ವರ್ಷದ ಭ್ಯಾಗ್ಯಶ್ರೀ ಸಾವಿನಲ್ಲಿ ಒಂದಾದ ಅಕ್ಕ ಮತ್ತು ತಮ್ಮ.

ಶಾಲೆಗೆ ಆರಂಭವಾಗಿದ್ದರಿಂದ ತರಗತಿಗೆ ತೆರಳುವಂತೆ ಪೋಷಕರು ನಾಗರಾಜ್ ಹೇಳಿದ್ದಾರೆ. ಇದರಿಂದ ಮುನಿಸಿಕೊಂಡ ನಾಗರಾಜ್ ಕೋಣೆಗೆ ತೆರಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶುಕ್ರವಾರ ಬೆಳಗ್ಗೆ ಆತ್ಮಹತ್ಯೆಗೆ ಮಾಡಿಕೊಡಿದ್ದು, ಮಧ್ಯಾಹ್ನ 12 ಗಂಟೆಗೆ ಸೋದರನ ಅಕ್ಕ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ಒಂದೇ ದಿನ ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ನೋವು ಆಕಾಶ ಮುಟ್ಟಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ವಶಕ್ಕೆ ಮರಣೋತ್ತರ ಶವ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ, ಸಂಜೆ ಕುಟುಂಬಸ್ಥರು ಅಂತ್ಯಕ್ರಿಯೆ ನೆರೆವೇರಿಸಿದ್ದಾರೆ.

ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿನಿತ್ಯ ಶಾಲೆಗೆ ಹೋಗು ಅಂದಿದ್ದಕ್ಕೆ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿರೋದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಆದರೆ ಇಬ್ಬರ ಸಾವಿನ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!