ಕಾರ್ಕಳ: ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ, ಬೈಕ್ ಸವಾರ ಸಾವು
ಕಾರ್ಕಳ : ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ಮಣ್ ಪೇಟೆಯಲ್ಲಿ ನಡೆದಿದೆ.
ಘಟನೆಯಲ್ಲಿ ಬೈಕ್ ಸವಾರ ಮರದಡಿಯಲ್ಲಿ ಸಿಲುಕಿಕೊಂಡಿದ್ದು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ.
ಮೃತರನ್ನು ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ. ಹಲವು ಗಂಟೆಗಳ ಕಾಲ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಬಳಿಕ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವುಗೊಳಿಸುವ ಕಾರ್ಯ ಮಾಡಿದರು.




