ನಾಪತ್ತೆಯಾಗಿದ್ದ ಜೈನಮುನಿಯ ಬರ್ಬರವಾಗಿ ಹತ್ಯೆ
ಚಿಕ್ಕೋಡಿ (ಬೆಳಗಾವಿ): ಹೀರೆಕುಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿಯನ್ನು ಬರ್ಬರವಾಗಿ ಹತ್ಯೆಗೈದಿದ್ದು, ಭಕ್ತರ ದೂರಿನ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯ ಹೀರೆಕುಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಬರ್ಬರವಾಗಿ ಹತ್ಯೆಯಾಗಿದ್ದಾರೆ. ಕಳೆದ 15 ವರ್ಷಗಳಿಂದ ನಂದಿ ಪರ್ವತ ಆಶ್ರಮದಲ್ಲಿ ವಾಸವಿದ್ದ ಇವರು ಜುಲೈ 6ರಿಂದ ಆಶ್ರಮದಿಂದ ನಾಪತ್ತೆಯಾಗಿದ್ದರು. ಈ ಕುರಿತು ಜುಲೈ 6ರಂದು ಭಕ್ತರು ಆಶ್ರಮದ ಸುತ್ತಮುತ್ತ ಶೋಧ ನಡೆಸಿದ್ದರು




