ಅನೈತಿಕ ಪೊಲೀಸ್ಗಿರಿ: ಸಂಘಪರಿವಾರದ ಇಬ್ಬರು ಕಾರ್ಯಕರ್ತರ ಬಂಧನ
ದಾವಣಗೆರೆ: ಅನೈತಿಕ ಪೊಲೀಸ್ಗಿರಿ ಮಾಡಿದ್ದ ಇಬ್ಬರು ಯುವಕರನ್ನು ದಾವಣಗೆರೆಯ ಕೆಟಿಜೆನಗರ ಠಾಣೆಯ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ದಾವಣಗೆರೆಯ ಎಸ್ಪಿ ಡಾ. ಅರುಣ್ ತಿಳಿಸಿದ್ದಾರೆ.
ಶುಕ್ರವಾರ ಕೆಟಿಜೆನಗರ ಠಾಣೆಯ ವ್ಯಾಪಿಗೆ ಬರುವ ಚಿತ್ರಮಂದಿರಕ್ಕೆ ಅನ್ಯಕೋಮಿನ ಯುವಕರ ಜೊತೆ ಯುವತಿಯೊಬ್ಬಳು ಸಿನಿಮಾಗೆ ಬಂದಿದ್ದಳು. ಇದರ ಬಗ್ಗೆ ಮಾಹಿತಿ ತಿಳಿದ ದೊಡ್ಡೇಶ್, ಲಿಂಗರಾಜ್ ಹಾಗೂ ಆತನ ಸ್ನೇಹಿತರು, ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದರು.




