ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ
ಮೈಸೂರು: ಚಿಕ್ಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ವಿಚಾರ ದೇಶಾದ್ಯಂತ ತಲ್ಲಣ ಸೃಷ್ಟಿಸಿದ ಬೆನ್ನಲ್ಲೇ ಇದೀಗ 60 ವರ್ಷದ ಸ್ವಾಮೀಜಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಮನೆ ನಗರಿ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಸ್ವಾಮೀಜಿಯನ್ನು ಶಿವಪ್ಪ ದೇವರು ಎಂದು ಗುರುತಿಸಲಾಗಿದ್ದು, ಇವರು ನಂಜನಗೂಡಿನ ದೇವನೂರು ಮಠದ ಸ್ವಾಮೀಜಿಗಳ ಶಿಷ್ಯ.
ಕಳೆದೆರಡು ದಿನದಿಂದ ಶಿವಪ್ಪ ದೇವರು ಸ್ವಾಮೀಜಿ ನಾಪತ್ತೆಯಾಗಿದ್ದರು. ಬಳಿಕ ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಮಡಿದ್ದಾರೆ.




