December 19, 2025

ರೂಪಾಂತರಿ ಕೊರೊನಾ ವೈರಸ್ ಹರಡುವ ಸಾಧ್ಯತೆ:
ಇಂದು ಸಂಜೆ ಅಧಿಕಾರಿಗಳ, ತಜ್ಞರ ಸಭೆ ಕರೆದ ಮುಖ್ಯಮಂತ್ರಿ ಬೊಮ್ಮಾಯಿ

0
bommai.jpg

ಬೆಂಗಳೂರು: ರೂಪಾಂತರಿ ಕೊರೋನಾ ವೈರಸ್ ಹಲವು ದೇಶಗಳಲ್ಲಿ ಕಾಣಿಸಿಕೊಂಡು ಹಬ್ಬುವ ಸಾಧ್ಯತೆಯಿರುವುದರಿಂದ ಹಾಗೂ ರಾಜ್ಯದ ಅನೇಕ ಕಡೆಗಳಲ್ಲಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗಿ ವಕ್ಕರಿಸಿರುವ ಹಿನ್ನೆಲೆಯಲ್ಲಿ ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳು, ತಜ್ಞರ ಸಭೆ ಕರೆದಿದ್ದಾರೆ.

ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿದ್ದು ಅದರಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಕಳೆದೊಂದು ವಾರದಿಂದ ಕೋವಿಡ್ ಕಾಣಿಸಿಕೊಂಡಿರುವ ಜಿಲ್ಲೆಗಳು ಸೇರಿದಂತೆ ರಾಜ್ಯದ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಬಿಬಿಎಂಪಿಯ ಮುಖ್ಯ ಆಯುಕ್ತರು, ಆರೋಗ್ಯ ಇಲಾಖೆ ಆಯುಕ್ತರು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥರು, ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿದ್ದು ಕೋವಿಡ್ 3ನೇ ಅಲೆ ಏಳುವ ಸಾಧ್ಯತೆ ನಿಚ್ಛಳವಾಗಿರುವುದರಿಂದ ಉಲ್ಬಣವಾಗದಂತೆ ಕ್ರಮ ಕೈಗೊಳ್ಳಲು ಇಂದಿನ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿ ಮಾರ್ಗಸೂಚಿಗಳನ್ನು ಹೊರಡಿಸುವ ಸಾಧ್ಯತೆಯಿದೆ. ಅಧಿಕಾರಿಗಳು, ತಜ್ಞರ ಜೊತೆ ಚರ್ಚೆ ನಡೆಸಿ ನಿರ್ಧಾರ ಕೈಗೊಂಡು ಜನತೆಗೆ ತಿಳಿಸುತ್ತೇನೆ ಎಂದು ಸಿಎಂ ಮಾಧ್ಯಮ ಪ್ರತಿನಿಧಿಗಳಿಗೆ ಇಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!