ಪ್ರಿಯಕರನ ಜೊತೆ ಪರಾರಿಯಾಗಿದ್ದ ಪತ್ನಿಯನ್ನು ಕತ್ತು ಕೊಯ್ದು ಕೊಲೆ ಮಾಡಿದ ಪತಿ
ದೊಡ್ಡಬಳ್ಳಾಪುರ: ಗಂಡನ ಬಿಟ್ಟು ಪ್ರಿಯಕರನ ಜೊತೆ ಪರಾರಿಯಾಗಿದ್ದ ಪತ್ನಿಯನ್ನ ಗಂಡ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರವ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ.
ಕೋಳೂರು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಭಾರತಿ (27) ಕೊಲೆಯಾದ ಗೃಹಿಣಿ. ಈಕೆಯ ಪತಿ ಹರೀಶ್ ಕೊಲೆ ಮಾಡಿದಾತ. ಮೃತ ಭಾರತಿ ಮೂಲತಃ ಮಧುಗಿರಿ ತಾಲೂಕಿನ ಐಡಿಹಳ್ಳಿ ಹೋಬಳಿಯ ಚಿಕ್ಕದಾಳವಟ್ಟ ಗ್ರಾಮದವಳಾಗಿದ್ದು, ಪತಿ ಹರೀಶ್ನ ತ್ಯಜಿಸಿ ಮಗುವಿನೊಂದಿಗೆ ಅದೇ ಗ್ರಾಮದ ಗಂಗರಾಜನೆಂಬ ವ್ಯಕ್ತಿಯೊಂದಿಗೆ ವಾಸಿಸುತ್ತಿದ್ದಳು.
ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದ ಬಾಡಿಗೆ ಮನೆಯಲ್ಲಿ ಕೆಲ ದಿನಗಳಿಂದ ಭಾರತಿ ಅಕ್ರಮವಾಗಿ ಸಂಸಾರ ನಡೆಸುತ್ತಿದ್ದಳು




