ಸುಳ್ಯ: ಭೂ ವಿವಾದಕ್ಕೆ ಸಹೋದರರಿಂದಲೇ ಅಣ್ಣನ ಕೊಲೆ
ಸುಳ್ಯ: ಭೂ ವಿವಾದಕ್ಕೆ ಸಂಬಂಧಪಟ್ಟಂತೆ ಸಹೋದರರಿಂದಲೇ ಅಣ್ಣ ಕೊಲೆಯಾದ ಘಟನೆ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಅರಂತಡ್ಕ ನಿವಾಸಿ ಉಸ್ಮಾನ್ ಮೃತಪಟ್ಟವರು. ಸತ್ತಾರ್, ರಫೀಕ್ ಆರೋಪಿಗಳು.
ಅಣ್ಣತಮ್ಮಂದಿರ ಕೃಷಿ ಭೂಮಿ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿತ್ತು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಸಹೋದರರು ಸೇರಿ ಉಸ್ಮಾನ್ ಅವರನ್ನು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ.




