ಸುಳ್ಯ: ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಸಹಿತ ಆರೋಪಿ ಪೊಲೀಸರ ವಶಕ್ಕೆ
ಸುಳ್ಯ: ಪರವಾನಗಿ ಇಲ್ಲದೆ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ.
ರತೀಶ್ ನಾರಾಯಣನ್ ಬಂಧಿತ ವ್ಯಕ್ತಿ.
ಬೆಳ್ಳಾರೆ ಕಡೆಯಿಂದ ಸೋಣಂಗೇರಿ ಮಾರ್ಗವಾಗಿ ಕೇರಳಕ್ಕೆ ಪಿಕಪ್ ವಾಹನದಲ್ಲಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸುಳ್ಯ ಪೊಲೀಸರು ಆರ್ತಾಜೆ ಎಂಬಲ್ಲಿ ವಾಹನವನ್ನು ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ.




