March 13, 2026

ಕೇಸ್‌ ಖುಲಾಸೆ ಮಾಡಿಕೊಡಲು ಲಂಚ: ಹೆಡ್‌ ಕಾನ್‌ಸ್ಟೇಬಲ್‌ ಲೋಕಾಯುಕ್ತ  ಬಲೆಗೆ

0
image_editor_output_image742820315-1689573065455.jpg

ರಾಮನಗರ: ವಂಚನೆ ಕೇಸ್‌ವೊಂದನ್ನ ಖುಲಾಸೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಹೆಡ್‌ ಕಾನ್‌ಸ್ಟೇಬಲ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ ಮಹೇಶ್ 50 ಸಾವಿರ ರೂ. ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ‌ ಖಾಸಗಿ ಹೋಟೆಲ್‌ನಲ್ಲಿ ಹಣ ಪಡೆಯುವಾಗ ಖಚಿತ ಮಾಹಿತಿ ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!