ದೇವಸ್ಥಾನ ಮುಂಭಾಗದಲ್ಲಿಯೇ ವ್ಯಕ್ತಿಯ ಬರ್ಬರ ಹತ್ಯೆ
ಬೆಳಗಾವಿ: ಅಮಾವಾಸ್ಯೆ ಎಂದು ದೇವಸ್ಥಾನಕ್ಕೆ ಹೋದ ಸಂದರ್ಭ ಪತ್ನಿಯ ಎದುರೇ ಗಂಡನ ಬರ್ಬರ ಹತ್ಯೆ ಮಾಡಿರುವ ಘಟನೆ ಮೂಡಲಗಿ ತಾಲೂಕಿನ ಬನಸಿದ್ದೇಶ್ವರ ದೇವಸ್ಥಾನ ಮುಂದೆ ನಡೆದಿದೆ.
ಘಟನೆಯಲ್ಲಿ ಶಂಕರ್ ಸಿದ್ದಪ್ಪ ಜಗಮುತ್ತಿ(25) ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಬನಸಿದ್ದೇಶ್ವರ ದೇವಸ್ಥಾನದ ಮುಂದೆ ಹೆಂಡತಿಯ ಕಣ್ಣೆದುರೇ ಗಂಡನ ಮೇಲೆ ಮಚ್ಚು ಲಾಂಗುಗಳಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.




