ಪ್ರೀತಿ ವಿಚಾರಕ್ಕೆ ಯುವಕನನ್ನು ಕಿಡ್ನಾಪ್ ಮಾಡಿ ಬೆಂಕಿ ಹಚ್ಚಿಕೊಂದ ದುಷ್ಕರ್ಮಿಗಳು
ಬೆಂಗಳೂರು: ಪ್ರೀತಿ ವಿಚಾರಕ್ಕೆ ಯುವಕನನ್ನು ಕಿಡ್ನಾಪ್ ಮಾಡಿ ಬೆಂಕಿ ಹಚ್ಚಿದ್ದರಿಂದ ಗಂಭೀರ ಗಾಯಗೊಂಡಿದ್ದ ಶಶಾಂಕ್ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಸಾವನ್ನಪ್ಪಿದ್ದಾನೆ.
ಆರ್ಆರ್ ನಗರದ ನಿವಾಸಿ ರಂಗನಾಥ್ ಹಾಗೂ ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್ನನ್ನು (19) ದುಷ್ಕರ್ಮಿಗಳು ಕಿಡ್ನಾಪ್ ಮಾಡಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು.
ಘಟನೆಯಿಂದಾಗಿ ಶಶಾಂಕ್ ದೇಹದ 90% ರಷ್ಟು ಭಾಗ ಸುಟ್ಟು ಹೋಗಿತ್ತು. ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಶಶಾಂಕ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.




