ಕಿನ್ನಿಗೋಳಿ: ಜ್ಯುವೆಲ್ಲರಿ ಮಾಲಕ ಬಾವಿಗೆ ಹಾರಿ ಆತ್ಮಹತ್ಯೆ
ಕಿನ್ನಿಗೋಳಿ: ಕಿನ್ನಿಗೋಳಿ ಪಟ್ಟಣ ಪಂಚಾಯುತ್ ವ್ಯಾಪ್ತಿಯಲ್ಲಿ ಜುವೆಲರಿ ಮಾಲಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧ ವಾರ ಕಿನ್ನಿಗೋಳಿಯ ರಾಮನಗರಲ್ಲಿ ನಡೆದಿದೆ.
ಕಿನ್ನಿಗೋಳಿ ನಿವಾಸಿ ಶ್ರೀಧರ ಆಚಾರ್ಯ ಜುವೆಲರ್ಸ್ನ ಮಾಲಕ ಉಮೇಶ್ ಆಚಾರ್ಯ (62) ಆತ್ಮಹತ್ಯೆಗೈದವರು. ಮಾನಸಿಕವಾಗಿ ನೊಂದ ಕಾರಣ ಅವರು ಬುಧವಾರ ತನ್ನ ಮನೆಯ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿನ್ನಿಗೋಳಿ ರೋಟರಿ ಕ್ಲಬ್ನ ಮಾಜಿ ಅಧ್ಯಕ್ಷರಾಗಿದ್ದ ಅವರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷರಾಗಿದ್ದರು. ಅವರು ಪತ್ನಿಯನ್ನು ಅಗಲಿದ್ದಾರೆ.




