ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಸಾವು
ವಿಜಯಪುರ : ಕರ್ತವ್ಯ ನಿರತ ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಸಾವಿಗೀಡಾದ ಘಟನೆ ವರದಿಯಾಗಿದೆ.
ವಿಜಯಪುರ ಜಿಲ್ಲೆಯ ಲೋಕಾಯುಕ್ತ ಡಿವೈಎಸ್ಪಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅರುಣ ನಾಯಕ ಹೃದಯಘಾತದಿಂದ ನಿಧನ ಹೊಂದಿದವರು.ವಿಜಯಪುರ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವಾಗ ಕುಸಿದು ಬಿದ್ದು ಅಸ್ಚಸ್ಥರಾಗಿದ್ದ ಅರುಣ ನಾಯಕ ಅವರನ್ನು ಕೂಡಲೇ ಸ್ಥಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೇ ಅರುಣ ನಾಯಕ ಸಾವಿಗೀಡಾಗಿದ್ದಾರೆ.ಪತ್ನಿ ಹಾಗೂ ಓರ್ವ ಪುತ್ರನನ್ನು ಅರುಣ ನಾಯಕ ಅಗಲಿದ್ದಾರೆ.ಅರುಣ ನಾಯಕ ಪುತ್ರ ವೈದ್ಯರಾಗಿದ್ದು, ಪತ್ನಿ ಮಗನೊಂದಿಗೆ ಬೆಂಗಳೂರಿನಲ್ಲೇ ವಾಸವಿದ್ದಾರೆ.




