ಸುಳ್ಯ: ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡ್ಡಿ
ಸುಳ್ಯ: ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಗೆ ಮಣ್ಣು ನುಸುಳಿಕೊಂಡು ಕರ್ನಾಟಕ ಮತ್ತು ಕೇರಳ ಸಂಪರ್ಕಿಸುವ ಕಲ್ಲಪಳ್ಳಿ-ಪಾಣತ್ತೂರು ಅಂತರ್ ರಾಜ್ಯ ರಸ್ತೆಯ ಬಾಟೋಳಿ ಎಂಬಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಬಾಟೋಳಿ ಗಡಿ ಪ್ರದೇಶದಿಂದ ಸುಮಾರು 100ಮೀ ಮುಂದೆ ಈ ಘಟನೆ ಸಂಭವಿಸಿದೆ.
ಗುಡ್ಡ ಕುಸಿತದಿಂದ ಪಾಣತ್ತೂರು ರಸ್ತೆ ಸಂಚಾರ ಬಂದ್ ಆಗಿದೆ.
ರಾತ್ರಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಭಾಗದಲ್ಲಿ ಹಿಂದೆಯೂ ಗುಡ್ಡ ಕುಸಿತಗೊಂಡಿದ್ದು, ಸಂಚಾರ ಕಡಿತಗೊಂಡಿದೆ.




