February 4, 2026

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

0
image_editor_output_image-110170515-1689834729424.jpg

ಮಂಗಳೂರು: ಒಂದು ವರ್ಷ 8 ತಿಂಗಳ ಮಗುವೊಂದು ನೀರು ತುಂಬಿದ್ದ ಬಕೆಟ್ ಗೆ ಬಿದ್ದು, ಮೃತಪಟ್ಟ ಘಟನೆ ಮಂಗಳೂರಿನ ಕಾವೂರಿನಲ್ಲಿ ನಡೆದಿದೆ.

ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತ ಮಗು.

ಜಾರ್ಖಂಡ್ ಮೂಲದವರಾದ ಫಿರೋಝ್ ಅನ್ಸಾರಿ ಕೂಲಿ ಕಾರ್ಮಿಕರಾಗಿದ್ದು, ಈ ದಂಪತಿಗಳು ಕಾವೂರು ಮಸೀದಿಯ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.

ಬುಧವಾರ ಸಂಜೆ ಮಗು ಆಯಿಶ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು, ಮೃತಪಟ್ಟಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!