ಉತ್ತರ ಕನ್ನಡ: KSRTC ಬಸ್ ನ ಅಡಿಗೆ ಬಿದ್ದ ಬೈಕ್
ಉತ್ತರ ಕನ್ನಡ: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹಾಗೂ ಸಹ ಸವಾರ ಪ್ರಾಣಪಾಯದಿಂದ ಪಾರಾಗಿರುವ ಘಟನೆ ಉತ್ತರ ಕನ್ನ ಜಿಲ್ಲೆ ಹೊನ್ನಾವರದ ರಾಮತೀರ್ಥ ಕ್ರಾಸ್ ಬಳಿ ಶುಕ್ರವಾರ ನಡೆದಿದೆ.
ರಸ್ತೆ ಕ್ರಾಸ್ ಮಾಡುವಾಗ ವೇಗವಾಗಿ ಬಂದ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರು ಸವಾರರು ಬೈಕ್ ನಿಂದ ಹಾರಿದ್ದಾರೆ. ಪರಿಣಾಮ ಇಬ್ಬರ ಅಪಾಯದಿಂದ ಪಾರಾಗಿದ್ದಾರೆ.
ಬೈಕ್ ಬಸ್ ಅಡಿಯಲ್ಲಿ ಸಿಕ್ಕಿ ಹಾಕಿಕೊಂಡು ನಜ್ಜುಗುಜ್ಜಾಗಿದೆ. ಸಬೈಕ್ ಸವಾರರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ.




