ವಿಟ್ಲ: ವಿಟ್ಲ ಸಮೀಪದ ಉಕ್ಕುಡ ಆಲಂಗಾರು ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೃಷಿಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಆಲಂಗಾರು ನಿವಾಸಿ ನಾರಾಯಣ ಗೌಡ (55 ವರ್ಷ ) ಎಂದು ಗುರುತಿಸಲಾಗಿದೆ.
ಮೃತರು ಪತ್ನಿ ನಳಿನಿ ಹಾಗೂ ಪ್ರಜ್ವಲ್ ಹಾಗೂ ಚೈತನ್ಯ ಎಂಬ ಮಕ್ಕಳನ್ನು ಅಗಲಿದ್ದಾರೆ.

