March 13, 2026

ಪುತ್ತೂರು: ಬೈಕ್ ಸ್ಕಿಡ್‌ ಆಗಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವು

0
image_editor_output_image87959764-1690179781796.jpg

ಪುತ್ತೂರು: ಬೈಕ್ ಸ್ಕಿಡ್‌ ಆಗಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ – ಪುತ್ತೂರು ರಸ್ತೆಯ ಕೆಮ್ಮಾಯಿ ಬಳಿ ನಡೆದಿದೆ.

ಸೇಡಿಯಾಪು ನಿವಾಸಿ ಚೈತ್ರೇಶ್ ಎಸ್. ಯಾನೆ ಚರಣ್‌ (20) ಮೃತ ವ್ಯಕ್ತಿ. ರಸ್ತೆಯಲ್ಲಿ ನೀರು ನಿಂತು ಬೇರೆ ವಾಹನದ ಬೆಳಕಿನಿಂದ ನೀರು ಕಾಣದೆ ಬೈಕ್ ರಸ್ತೆಯ ಸ್ಕಿಡ್ ಆಗಿ ಬಿದ್ದಿದೆ ಎಂದು ಹೇಳಲಾಗಿದೆ.

ಬೈಕ್ ರಸ್ತೆಯಲ್ಲಿ ಜಾರುತ್ತಿದ್ದಂತೆ, ಸವಾರನ ತಲೆ ವಿಭಜಕಕ್ಕೆ ಬಡಿದಿದೆ. ಇದರಿಂದ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟದ್ದಾರೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!