February 2, 2026

ಲೋಕಾಯುಕ್ತ ದಾಳಿ: ಲಂಚದ ಹಣವನ್ನೇ ನುಂಗಿದ ಕಂದಾಯ ಅಧಿಕಾರಿ

0
image_editor_output_image-826198379-1690265649587.jpg

ಮಧ್ಯಪ್ರದೇಶ: ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಕಂದಾಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿಯುವ ವೇಳೆ ಕಂದಾಯ ಅಧಿಕಾರಿಯೊಬ್ಬ ಲಂಚದ ಹಣವನ್ನೇ ನುಂಗಿ ನೀರು ಕುಡಿದ ವಿಚಿತ್ರ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ.

ಮಧ್ಯಪ್ರದೇಶದ ಕಟ್ನಿಯಲ್ಲಿ ಕಂದಾಯ ಅಧಿಕಾರಿಯಾಗಿರುವ ಪಟ್ವಾರಿ ಗಜೇಂದ್ರ ಸಿಂಗ್ ವ್ಯಕ್ತಿಯೊಬ್ಬರ ಜಮೀನು ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ವ್ಯಕ್ತಿಯಿಂದ 5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ವಿಚಾರವಾಗಿ ವ್ಯಕ್ತಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದ ಎನ್ನಲಾಗಿದೆ ಅದರಂತೆ ಸೋಮವಾರ ಕಂದಾಯ ಅಧಿಕಾರಿ ಗಜೇಂದ್ರ ಸಿಂಗ್ ಅವರ ಕಚೇರಿಗೆ ವ್ಯಕ್ತಿ ತೆರಳಿದ್ದಾನೆ.

ಈ ವೇಳೆ ಅಧಿಕಾರಿಗೆ ಲಂಚದ ಹಣವನ್ನು ಕೈಗೆ ನೀಡಿದ್ದಾನೆ ದುಡ್ಡು ನೀಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಇದನ್ನು ಕಂಡ ಕಂದಾಯ ಅಧಿಕಾರಿ ಇನ್ನೇನು ತಾನು ಸಿಕ್ಕಿ ಬೀಳುತ್ತೇನೆ ಎನ್ನುವಷ್ಟರಲ್ಲಿ ಕೂಡಲೇ ತನ್ನ ಕೈಯಲ್ಲಿದ್ದ 500 ರೂಗಳ ಹತ್ತು ನೋಟುಗಳನ್ನು ಮುದ್ದೆ ಮಾಡಿ ಬಾಯಿಯೊಳಗೆ ಹಾಕಿ ನೀರು ಕುಡಿದು ಬಿಟ್ಟಿದ್ದಾನೆ.

Leave a Reply

Your email address will not be published. Required fields are marked *

error: Content is protected !!