ಮಂಗಳೂರು: ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ನೀರಿಗೆ ಬಿದ್ದು ಸಾವು
ಮಂಗಳೂರು: ನಗರದ ಸ್ಟೇಟ್ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ವೇಳೆ ನಡೆದಿದೆ.
ಉಳ್ಳಾಲದ ನಿವಾಸಿ ಮುಝಮ್ಮಿಲ್ (32) ಮೃತಪಟ್ಟ ಯುವಕ.
ಮಂಗಳವಾರ ಸಂಜೆ ಸುಮಾರು 4:30ರ ವೇಳೆಗೆ ದಕ್ಕೆ ಮೀನುಗಾರಿಕಾ ಜೆಟ್ಟಿ ಬಳಿ ನಿಂತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ತಕ್ಷಣ ಇತರ ಮೀನುಗಾರರು ಅವರನ್ನು ರಕ್ಷಿಸುವ ಪ್ರಯತ್ನ ಮಾಡಿದರೂ ಪ್ರಯೋಜನವಾಗಲಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದೆ.




