ಮನೆ ಬೀಗ ಮುರಿದು ಚಿನ್ನಾಭರಣ ಕಳವು ಪ್ರಕರಣ: ಆರೋಪಿಯನ್ನು ಬಂಧಿಸಿದ ಸುಬ್ರಮಣ್ಯಪುರ ಪೊಲೀಸರು
ಬೆಂಗಳೂರು: ಅಮರನಾಥ ಯಾತ್ರೆಗೆಂದು ಹೋಗಿದ್ದ ಸಂದರ್ಭ ಮನೆ ಬೀಗ ಮುರಿದು ಯಾತ್ರಿಕರ ಮನೆಯಲ್ಲಿದ್ದ ಚಿನ್ನಾಭರಣವನ್ನು ದೋಚಿದ ಖದೀಮನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ರಾಮಸ್ವಾಮಿ ಅಲಿಯಾಸ್ ವಡಿವೇಲು ರಾಮಸ್ವಾಮಿ ಬಂಧಿತ ಆರೋಪಿ. ಅಮರನಾಥ ಯಾತ್ರೆಗೆಂದು ಹೋಗಿದ್ದ ಯಾತ್ರಿಕನ ಮನೆಯ ಬೀಗ ಮುರಿದು ಮನೆಯಲ್ಲಿದ್ದ ಅರ್ಧ ಕೆಜಿಗೂ ಅಧಿಕ ಚಿನ್ನ ಹಾಗೂ ಹಣವನ್ನು ಕದ್ದು ಆರೋಪಿ ಪರಾರಿಯಾಗಿದ್ದ. ನಗರದಲ್ಲಿ ಖಾಲಿ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಈತನನ್ನು ಕದ್ದ ಮಾಲು ಸಮೇತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.




