September 20, 2024

ಉಳ್ಳಾಲ: 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಮಂಗಳೂರು: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಇಪ್ಪತ್ತ ಮೂರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಉಳ್ಳಾಲದ ದುರ್ಗಾ ಕ್ವಾಟ್ರಾಸ್ ನಿವಾಸಿಯಾಗಿರುವ ಬಶೀರ್ (51) ಎನ್ನಲಾಗಿದೆ.

2000 ರ ಡಿಸೆಂಬರ್ 17 ರ ರಾತ್ರಿ 8:45 ಗಂಟೆಗೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಚೂರಿ ತೋರಿಸಿ ಮಹಿಳೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಸಿದು ಪರಾರಿಯಗಿದ್ದರು ಈ ಘಟನೆಗೆ ಸಂಬಂಧಿಸಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!