ಪುತ್ತೂರು |ಪೂರ್ವಾನುಮತಿ ಇಲ್ಲದೆ ವಿಜಯೋತ್ಸವ: ಪುತ್ತಿಲ ಪರಿವಾರ ಸಂಘಟನೆ ವಿರುದ್ಧ FIR ದಾಖಲು
ಪುತ್ತೂರು: ಪೂರ್ವಾನುಮತಿ ಇಲ್ಲದೆ ವಿಜಯೋತ್ಸವ ಮಾಡಿದ ಹಿನ್ನಲೆ ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರ್ಯಾಪು ಗ್ರಾ.ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಜಯಗಳಿಸಿತ್ತು, ಈ ಹಿನ್ನಲೆಯಲ್ಲಿ ವಿಜಯೋತ್ಸವ ನಡೆಸಲಾಗಿದೆ. ಮಿನಿ ವಿಧಾನಸೌಧದಿಂದ ಮುಕ್ರಂಪಾಡಿವರೆಗೆ ಡಿಜೆ ಮೆರವಣಿಗೆ ನಡೆಸಿದ್ದ ಪುತ್ತಿಲ ಪರಿವಾರ ವಿರುದ್ದ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಶಾಂತಿಭಂಗದ ಪ್ರಕರಣ ದಾಖಲಿಸಲಾಗಿದೆ.