September 20, 2024

ಮಂಗಳೂರು: ಮಣಿಪುರ ಹಿಂಸಾಚಾರ ಖಂಡಿಸಿ ಪ್ರತಿಭಟನಾ ಸಭೆ: ಎರಡು ಸಾವಿರಕ್ಕೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಭಾಗಿ

0

ಮಂಗಳೂರು: ಮಣಿಪುರದಲ್ಲಿ ಮುಂದುವರಿದ ಜನಾಂಗೀಯ ಗಲಭೆ ಖಂಡಿಸಿ ಮಂಗಳೂರಿನಲ್ಲಿ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ, ಮಂಗಳೂರು ಧರ್ಮ ಕ್ಷೇತ್ರದ ಮಹಿಳಾ ಆಯೋಗ, ಕ್ರೈಸ್ತ ಐಕ್ಯತೆಯ ಆಯೋಗ, ಮಂಗಳೂರು ಕ್ರಿಶ್ಚಿಯನ್ ಕೌನ್ಸಿಲ್ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಟೌನ್ ಹೌಲ್ ಮುಂಭಾಗ ಪ್ರತಿಭಟನಾ ಸಭೆ ನಡೆದಿದ್ದು, ಪ್ರತಿಭಟನೆಯಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದು, ಪ್ಲೇ ಕಾರ್ಡ್ ಹಿಡಿದು ಕೇಂದ್ರ, ಮಣಿಪುರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ರಿಶ್ಚಿಯನ್ನರ ಮೇಲಿನ ದಾಳಿ ಕೇಂದ್ರ ಸರ್ಕಾರದ ದ್ವೇಷ ರಾಜಕಾರಣದ ಭಾಗ, ಮೀಸಲಾತಿ ಹೆಸರಿನಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ ಸಲ್ಲದು, ಮಣಿಪುರದ ಜನತೆ ನೀವು ಒಂಟಿಯಲ್ಲ ನಿಮ್ಮೊಂದಿಗೆ ನಾವಿದ್ದೇವೆ, ವಿವಿಧ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!