December 16, 2025

ಆ.1ರಂದು ದ.ಕ., ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ

0
IMG-20230730-WA0003.jpg

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ವಾಶ್‌ರೂಮ್‌ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಿಸಿದ್ದ ಪ್ರಕರಣ ರಾಜಕೀಯವಾಗಿ ಸಾಕಷ್ಟು ಕಾವು ಪಡೆದುಕೊಂಡಿರುವಾಗ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ ಪ್ರಮುಖ್ಯತೆ ಪಡೆದುಕೊಂಡಿದೆ.

ಇದಲ್ಲದೇ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳು ಬಿಜೆಪಿ ತೆಕ್ಕೆಯಲ್ಲಿರುವಾಗ ಮುಂಬರುವ ಸ್ಥಳೀಯ ಸಂಸ್ಥೆ ಮತ್ತು ಲೋಕಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಉಡುಪಿ ಜಿಲ್ಲಾ ಕಾಂಗ್ರೆಸ್‌ಗೆ ಉತ್ತೇಜನ ನೀಡುವುದು ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಭೇಟಿ ಮಹತ್ವ ಪಡೆದುಕೊಂಡಿದೆ.

ಆಗಸ್ಟ್ 1ರಂದು ಪೂರ್ವಾಹ್ನ 11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಉಡುಪಿಗೆ ತೆರಳುವರು.‌ 12:30ಕ್ಕೆ ಉಡುಪಿ ಜಿಪಂ ಸಭಾಂಗಣದಲ್ಲಿ ‌ಪ್ರಗತಿ ಪರಿಶೀಲನೆ ನಡೆಸುವರು. ಸಂಜೆ 4:15ಕ್ಕೆ ದ.ಕ.ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ದ.ಕ.ಜಿಪಂ ಸಭಾಂಗಣದಲ್ಲಿ ನಡೆಸುವರು. ರಾತ್ರಿ 9:50ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!