ಕೃಷಿ ಹೊಂಡಕ್ಕೆ ಬಿದ್ದು ದಂಪತಿ ಮೃತ್ಯು
ದೇವನಹಳ್ಳಿ: ಬಿಜ್ಜವಾರ ಗ್ರಾಮದ ಕೃಷಿ ಹೊಂಡದಲ್ಲಿ ಬಿದ್ದು ದಂಪತಿ ಮೃತಪಟ್ಟಿದ್ದಾರೆ.
ಕೆರೆಕೋಡಿ ನಿವಾಸಿ ರಮೇಶ್(26), ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜರುಗಹಳ್ಳಿ ಗ್ರಾಮದ ಸಹನಾ (22) ಮೃತರು.
ದೇವನಹಳ್ಳಿಯ ರೆಡ್ಡಿ ಎಲೆಕ್ಟ್ರಾನಿಕ್ಸ್ ನಲ್ಲಿ ವ್ಯವಸ್ಥಾಪಕರಾಗಿ ಆಗಿ ಕೆಲಸ ಮಾಡುತ್ತಿದ್ದ ರಮೇಶ್, ಜರುಗಹಳ್ಳಿಯ ಸಹನಾ ಅವರನ್ನು ಪ್ರೀತಿಸಿ ಐದು ತಿಂಗಳ ಹಿಂದೆ ಮದುವೆಯಾಗಿದ್ದರು. ಐದು ದಿನಗಳ ಹಿಂದೆ ಬಿಜ್ಜವಾರದ ಸಂಬಂಧಿಕರ ಮನೆಗೆ ಬಂದಿದ್ದರು.
ಭಾನುವಾರ ಬಿಜ್ಜವಾರದ ಅಶ್ವಥನಾರಾಯಣ ಎಂಬುವವರ ತೋಟದ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ.





