December 19, 2025

ನ್ಯಾಯಾಲಯಕ್ಕೆ ಕರೆದೊಯ್ಯುವಾಗ ವಿಚಾರಧೀನ ಕೈದಿ ಪರಾರಿ

0
image_editor_output_image-1031748417-1691215794991.jpg

ಚಾಮರಾಜನಗರ: ಕೋರ್ಟ್‍ಗೆ ಕರೆದೊಯ್ಯುವಾಗ ವಿಚಾರಣಾಧೀನ ಕೈದಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ತಮಿಳುನಾಡಿನ ಹಾಸನೂರು ಬಳಿ ನಡೆದಿದೆ.

ಆರೋಪಿಯನ್ನು ಚಾಮರಾಜನಗರ ಉಪಕಾರಾಗೃಹದಿಂದ ತಮಿಳುನಾಡಿನ ಸತ್ಯಮಂಗಲಂ ನ್ಯಾಯಾಲಯಕ್ಕೆ ಕರೆದೊಯ್ಯುವ ವೇಳೆ ಈ ಘಟನೆ ನಡೆದಿದೆ.

ಮೇಗಲಹುಂಡಿಯ ಸುರೇಶ್ (28) ಎಂಬಾತ ಪರಾರಿಯಾದ ವ್ಯಕ್ತಿ. ಹಾಸನೂರು ಬಳಿ ಟೀ ಕುಡಿಯುವ ವೇಳೆ ಆರೋಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!