December 19, 2025

ಡೆಂಗ್ಯೂ ಜ್ವರಕ್ಕೆ 3 ವರ್ಷದ ಬಾಲಕ ಮೃತ್ಯು

0
image_editor_output_image2142127029-1691229072127.jpg

ಹಾಸನ: ಶಂಕಿತ ಡೆಂಗ್ಯೂ ಜ್ವರಕ್ಕೆ ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಹಾಸನದ ಅರಸೀಕೆರೆ ‌ತಾಲೂಕಿನ ಬಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾದ ವರ್ಷದ ಚರಣ್ (3) ಮೃತ ಬಾಲಕ.

ಕಾಳನಕೊಪ್ಪಲು ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಜನರನ್ನು ಡೆಂಗ್ಯೂ ಜ್ವರ ಕಾಡುತ್ತಿದ್ದರೂ ಸೋಂಕು ತಡೆಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ.

ಬಾಲಕನ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಚರಣ್ ಪೋಷಕರು ಚಿಕ್ಕಮಗಳೂರಿನಲ್ಲಿ ನೆಲೆಸಿದ್ದರು.

ಬಳಿಕ ಹಾಸನಕ್ಕೆ ಬಂದು ವಾಪಾಸು ಚಿಕ್ಕಮಗಳೂರಿಗೆ ಹೋದ ಮೇಲೆ ಚರಣ್ ಗೆ ಜ್ವರ ಬಂದಿತ್ತು.

ಹೀಗಾಗಿ ಬಾಲಕನಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!