December 19, 2025

ಮಂಗಳೂರು: ಮಕ್ಕಳ ಮೇಲೆ ಕೆಟ್ಟ ದೃಷ್ಟಿ: ಇಬ್ಬರು ತಳ್ಳುಗಾಡಿ ವ್ಯಾಪಾರಿಗಳು ಅರೆಸ್ಟ್

0
IMG-20230504-WA0062.jpg

ಮಂಗಳೂರು: ಫೋನ್‌-ಇನ್‌ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಬಂದ ದೂರಿನಂತೆ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಅಮರ್‌ ಮತ್ತು ಸೂರಜ್‌ ಬಂಧಿತ ಆರೋಪಿಗಳು. ಇವರು ಅತ್ತಾವರದಲ್ಲಿ ನಡೆದುಕೊಂಡು ಹೋಗುವ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ, ಮಕ್ಕಳು ಹಾದು ಹೋಗುವಾಗ ಹಿಂಬಾಲಿಸಿ, ಕೆಟ್ಟ ದೃಷ್ಠಿಯಿಂದ ನೋಡುವ ಆರೋಪ ಕೇಳಿಬಂದಿತ್ತು.

ಕಮಿಷನರ್‌ ಕುಲದೀಪ್‌ ಕುಮಾರ್‌ ಜೈನ್‌ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದೆ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರ ಕೇಂದ್ರ ವಿಭಾಗದ ಎಸಿಪಿ ಮಹೇಶ್‌ ಕುಮಾರ್‌ ನೇತೃತ್ವದಲ್ಲಿ ಮಹಿಳಾ ಠಾಣಾ ಇನ್‌ಸ್ಪೆಕ್ಟರ್‌ ಲೋಕೇಶ್‌ ಎ.ಸಿ. ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!