ಹಾಲಿನ ಲಾರಿಗೆ ಕಾರು ಢಿಕ್ಕಿ: ಐವರು ಗಂಭೀರ
ರಾಮನಗರ: ಹಾಲಿನ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ಬಿದ್ದಿದೆ. ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯವಾಗಿದೆ.
ಕಾರಿನಲ್ಲಿದ್ದವರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ.




