December 19, 2025

ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತ್ಯು, ಮೂವರು ಗಾಯ

0

ಕುಣಿಗಲ್: ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ತಾಲೂಕಿನ ಡಿ.ಹೊಸಹಳ್ಳಿ ಹಾಗೂ ಎಡಿಯೂರು ದೇವಾಲಯದ ಸಮೀಪ ಆ.12ರ ಶನಿವಾರ ನಡೆದಿದೆ.

ತಾಲೂಕಿನ ಹುಲಿಯೂರುದುರ್ಗ ಹೋಬಳಿ ಎಂ.ಬೊಮ್ಮನಹಳ್ಳಿ ಗ್ರಾಮದ ನಿವಾಸಿ ನಂಜುಡಯ್ಯ (50), ಹುತ್ರಿದುರ್ಗ ಹೋಬಳಿ ವಾಸಿ ಪ್ರಿಯಾಂಕ (25) ಪ್ರತ್ಯೇಕ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಗಳು

ನಂಜುಡಯ್ಯ ಎಂಬವರು ಕೆಲಸದ ನಿಮಿತ್ತ ತನ್ನ ಸ್ವ ಗ್ರಾಮ ಎಂ.ಬೊಮ್ಮನಹಳ್ಳಿ ಗ್ರಾಮದಿಂದ ಬೈಕ್‌ನಲ್ಲಿ ಹುಲಿಯೂರುದುರ್ಗಕ್ಕೆ ಹೋಗಿ ತನ್ನ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಟೆಂಪೋವೊಂದು ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಸ್ಥಳಕ್ಕೆ ಹುಲಿಯೂರುದುರ್ಗ ಪಿಎಸ್‌ಐ ಸುನೀಲ್‌ ಕುಮಾರ್ ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!