ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದ ಮಗನಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದ ಮಗನಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ನಡೆದಿದೆ.
ಮೃತ ಯುವಕನನ್ನು ಉಜ್ವಲ್ (18) ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣನಾಗಿದ್ದ. ಯುವಕ ಮನೆಯಲ್ಲಿ ಮೌನವಾಗಿರುತ್ತಿದ್ದ. ಹೆಚ್ಚಾಗಿ ಮೊಬೈಲ್ನಲ್ಲೇ ಕಾಲ ಕಳೆಯುತ್ತಿದ್ದ.
ಈ ವಿಚಾರವಾಗಿ ಅವನ ತಾಯಿ ಹಲವಾರು ಬಾರಿ ಬುದ್ಧಿವಾದ ಹೇಳಿದ್ದರು. ಅಲ್ಲದೇ ಬುಧವಾರ ರಾತ್ರಿ ತಡವಾಗಿ ಮನೆಗೆ ಬಂದಿದ್ದಾನೆ.
ಇದಕ್ಕಾಗಿ ಯುವಕನ ತಾಯಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿ ಬುದ್ಧಿವಾದ ಹೇಳಿದ್ದರು. ಬಳಿಕ ರಾತ್ರಿ ಊಟ ಮಾಡಿ, ತನ್ನ ಕೋಣೆಯ ಒಳಗೆ ಹೋಗಿದ್ದ.




