ವಿಟ್ಲ: ಬಾಲಕರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪುತ್ತೂರು ಬಸ್ ನಿಲ್ದಾಣದಲ್ಲಿ ಪತ್ತೆ
ವಿಟ್ಲ : ಬಾಲಕರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ವಿಟ್ಲ ಬಾಲಕರ ವಿದ್ಯಾರ್ಥಿ ನಿಲಯದಿಂದ ದೀಕ್ಷಿತ್ (15) ಮತ್ತು ಗಗನ್ (14) ನಾಪತ್ತೆಯಾಗಿದ್ದರು.
ಈ ಬಗ್ಗೆ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದರು. ಈ ವೇಳೆ ಬಾಲಕರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದ ಬಗ್ಗೆ ಮಾಹಿತಿ ಲಭಿಸಿದೆ.
Advertisement
ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕರನ್ನು ಠಾಣೆಗೆ ಕರೆದೊಯ್ಯಿದಿದ್ದಾರೆಂದು ತಿಳಿದು ಬಂದಿದೆ..




