ಹಾಡಿಯಂಗಡಿ: ಜ್ವರದಿಂದ ಯುವಕ ಸಾವು
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದದಲ್ಲಿ ವರದಿಯಾಗಿದೆ.ಶಿರ್ಲಾಲು ಗ್ರಾಮದ ಹಾಡಿಯಂಗಡಿ ನಿವಾಸಿ ರಜನೀಶ್ (18) ಮೃತಪಟ್ಟ ಯುವಕ.
ರಜನೀಶ ಕಳೆದ ಹಲವು ಸಮಯದಿಂದ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದು, 3 ವಾರದ ಹಿಂದೆ ಉಡುಪಿಯ ಅಜ್ಜರಕಾಡಿನ ಜಿಲ್ಲಾ ಸರಕಾರಿ ಆಸ್ವತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಮನೆಗೆ ಮರಳಿದ್ದರು.
ಇದಾದ 10 ದಿನಗಳ ನಂತರ ಶಸ್ತ್ರ ಚಿಕಿತ್ಸೆಯ ಹೊಲಿಗೆ ತೆಗೆಯಿಸಿ, ವಾಂತಿ ಹಾಗೂ ಜ್ವರಕ್ಕೆ ಔಷಧಿ ಪಡೆದುಕೊಂಡು ಬಂದಿದ್ದರು ಎನ್ನಲಾಗಿದೆ.




