April 8, 2025

ಬೈಂದೂರು: ಸಮುದ್ರಪಾಲಾಗಿದ್ದ ಮೀನುಗಾರಿಕ ಯುವಕರಿಬ್ಬರ ಶವ ಪತ್ತೆ

0


 
ಬೈಂದೂರು: ಉಡುಪಿಯ ಕುಂದಾಪುರ ಸಮೀಪದ ಬೈಂದೂರಿನ ಶಿರೂರು ಅಳ್ವೆಗದ್ದೆ ಎಂಬಲ್ಲಿ ರವಿವಾರ ಸಂಜೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹವು ಇಂದು ಪತ್ತೆಯಾಗಿದೆ.

ದೋಣಿ ಮಗುಚಿ ಬಿದ್ದ 300 ಮೀಟರ್ ವ್ಯಾಪ್ತಿಯಲ್ಲಿ ಗಂಗೊಳ್ಳಿ ಮುಸ್ತಾಫಾ ಅವರ ಮಗ ಮುಹಮ್ಮದ್ ಮುಸಾಬ್ (22) ಹಾಗೂ ಬಾವು ನೂರುಲ್ ಅಮೀನ್ ಅವರ ಮಗ ನಝಾನ್ (24) ಅವರ ಮೃತದೇಹವು ದೊರೆತಿದೆ. ಇವರು ಅಲ್ಜಿ ಮುಹಮ್ಮದ್ ಯಾಸೀನ್, ಸಾರಾಂಗ್ ಮುಸ್ತಾಕ್ ಎಂಬವರೊಂದಿಗೆ ಕೈರಂಪಣಿ ಬಲೆಯನ್ನು ಹಾಕಿ ಮೀನುಗಾರಿಕೆ ಮಾಡಲು ಶಿರೂರು ಗ್ರಾಮದ ಅಳಿವೆಗದ್ದೆ ಕಿರು ಬಂದರಿಗೆ ತೆರಳಿದ್ದು, ಅಲ್ಲಿ ಮುಸಾಬ್ ಹಾಗೂ ನಝಾನ್, ಕುರ್ಡಿ ಸಾಧಿಕ್ ಎಂಬವರ ಸೈಫಾ ಎಂಬ ದೋಣಿಯಲ್ಲಿ ಬಲೆಯನ್ನು ಬಿಡುತ್ತಾ ತೀರದಿಂದ ಸುಮಾರು 100 ಮೀಟರ್ ದೂರ ಹೋಗಿದ್ದರು. ಬಲೆಯನ್ನು ಬಿಡುತ್ತಿರುವಾಗ ದೋಣಿಯು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ ಎನ್ನಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!