February 2, 2026

ಮಂಗಳೂರು: ಯುವಕನೋರ್ವನ ಕೊಲೆ ಯತ್ನ ಪ್ರಕರಣ: ಆರೋಪಿ ಸಿಸಿಬಿ ಪೊಲೀಸರ ವಶಕ್ಕೆ

0
image_editor_output_image104225916-1693329083900.jpg


 
ಮಂಗಳೂರು: ನಗರ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾದಾತನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

12-08-2023 ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬವರಲ್ಲಿ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ನಮೀರ್ ಹಂಸ ಎಂಬಾತನು ಗಲಾಟೆ ಮಾಡಿಕೊಂಡು ಏಕಾಎಕಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿನಾತ ನಮೀರ್ ಹಂಸನು ಕೃತ್ಯ ನಡೆಸಿದ ನಂತರ ತಲೆಮರೆಸಿಕೊಂಡಿದ್ದನು. ಆತನ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಇದೀಗ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!