ವಿಧಾನ ಪರಿಷತ್ ಚುನಾವಣೆ:
ಪುತ್ತೂರು ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್ ಡಿ ಪಿ ಐ ಅಭ್ಯರ್ಥಿಯಿಂದ ಮತಯಾಚನೆ
ಪುತ್ತೂರು: ವಿಧಾನ ಪರಿಷತ್ ಚುನಾವಣೆಯ ಎಸ್ ಡಿ ಪಿ ಐ ಪಕ್ಷದ ಅಭ್ಯರ್ಥಿ ಶಾಫಿ ಬೆಳ್ಳಾರೆ ಅವರು ವಿವಿಧೆಡೆ ಪ್ರಚಾರ ನಡೆಸಿದರು.
ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಸವಣೂರು, ಕುಂಬ್ರ, ಕಬಕ, ಉಪ್ಪಿನಂಗಡಿ, ಮೊದಲಾದ ಕಡೆಗಳಲ್ಲಿ ಪ್ರಚಾರ ನಡೆಸಿದರು.
ಈ ಸಂದರ್ಭ ಎಸ್ ಡಿ ಪಿ ಐ ರಾಜ್ಯ ಸಮಿತಿ ಸದಸ್ಯರಾದ ಅತಾವುಲ್ಲಾ ಜೋಕಟ್ಟೆ,ಪಕ್ಷದ ಮುಖಂಡರಾದ ಝಕಾರಿಯ ಕಲ್ಲಡ್ಕ, ಜಿಲ್ಲಾ ಕಾರ್ಯದರ್ಶಿ ಶಾಕೀರ್ ಅಳಕೆಮಜಲು,ಜಿಲ್ಲಾ ಸಮಿತಿ ಸದಸ್ಯರಾದ ಜಮಾಲ್ ಜೋಕಟ್ಟೆ, ಪುತ್ತೂರು ವಿಧಾನಸಭಾ ಕ್ಷೆತ್ರ ಸಮಿತಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್, ಉಪಾಧ್ಯಕ್ಷರಾದ ಹಮೀದ್ ಸಾಲ್ಮರ, ಜೊತೆ ಕಾರ್ಯದರ್ಶಿ ಅನ್ವರ್ ಪೆರುವಾಯಿ, ಸಮಿತಿ ಸದಸ್ಯರಾದ ರಹೀಮ್ ಕಂಬಳಬೆಟ್ಟು, ಸುಳ್ಯ ವಿಧಾನಸಭಾ ಅಧ್ಯಕ್ಷರಾದ ಇಕ್ಬಾಲ್ ಬೆಳ್ಳಾರೆ, ಮುಖಂಡರಾದ ಜಾಬಿರ್ ಅರಿಯಡ್ಕ, ಕಡಬ ಬ್ಲಾಕ್ ಅಧ್ಯಕ್ಷರಾದ ಬಶೀರ್ ಕಡಬ, ಮತ್ತು ಸ್ಥಳೀಯ ಬ್ಲಾಕ್ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಗಳು ಉಪಸ್ಥಿತರಿದ್ದರು.