ಜೈಲಿನ ಗೋಡೆ ಹಾರಿ ಕೊಲೆ ಪ್ರಕರಣ ಆರೋಪಿ ಪರಾರಿ
ರಾಯಚೂರು: ಕೊಲೆ ಪ್ರಕರಣದ ವಿಚಾರಣಾಧೀನ ಖೈದಿಯೊಬ್ಬ ಜೈಲಿನ ಗೋಡೆ ಹಾರಿ ಪರಾರಿಯಾದ ಘಟನೆ ದೇವದುರ್ಗ ಉಪ ಕಾರಾಗೃಹದಲ್ಲಿ ನಡೆದಿದೆ.
ಅನ್ವರ್ ಬಾಷಾ ಎಂಬಾತ ಜೈಲಿನಿಂದ ಪರಾರಿಯಾಗಿರುವ ಆರೋಪಿ. ಈತ ದೇವದುರ್ಗದ ಮಸಿಹಾಳ ಬಳಿ ಮೇ ತಿಂಗಳಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯಾಗಿದ್ದ. ವಿಜಯನಗರದ ರಾಮನಗರ ನಿವಾಸಿಯಾಗಿದ್ದ ಈತ ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿದ್ದ. ಆರೋಪಿಯ ಪತ್ತೆಗೆ ಅಧಿಕಾರಿಗಳು ಬಲೆ ಬೀಸಿದ್ದಾರೆ.




