ಜಿ20 ಶೃಂಗಸಭೆ ಮುಗಿದರೂ ಭಾರತದಲ್ಲೇ ಉಳಿದ ಕೆನಡಾ ಪ್ರಧಾನಿ: ಕಾರಣವೇನು ಗೊತ್ತೇ?
ನವದೆಹಲಿ: 2 ದಿನಗಳ ಜಿ20 ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಾಂತ್ರಿಕ ಸಮಸ್ಯೆಯಿಂದಾಗಿ ಭಾನುವಾರ ರಾತ್ರಿ ದೆಹಲಿಯಲ್ಲೇ ಕಳೆಯುವಂತಾಗಿದೆ.
ಜಿ20 ಶೃಂಗಸಭೆ ಮುಗಿಸಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೊರಡಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಈ ಕಾರಣದಿಂದ ಇಂದು ರಾತ್ರಿ ಟ್ರುಡೊ ದೆಹಲಿಯಲ್ಲಿಯೇ ಉಳಿದುಕೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಹೊರಡಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.





