February 3, 2026

ಲಾರಿ, ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: , ಬಸ್ಸಿನಲ್ಲಿದ್ದ 5 ಮಂದಿ ಮೃತ್ಯು

0
image_editor_output_image-1160615340-1694410684649.jpg

ಚಿತ್ರದುರ್ಗ: ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿದ್ದ 5 ಜನ ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 450(ಎ)ರಲ್ಲಿ ಬೆಳ್ಳಂ ಬೆಳಗ್ಗೆ ಸಂಭವಿಸಿದೆ.

ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ45), ರಾಯಚೂರು ರಾಯಚೂರು ಜಿಲ್ಲೆ ಮಸ್ಕಿ ಮೂಲದ ರಮೇಶ್(40), ರಾಯಚೂರಿನ ಆಲಾಪುರದ ರವಿ (23), ರಾಯಚೂರಿನ ಮಾಬಮ್ಮ(35), ಮಾನ್ವಿ ಮೂಲದ ಬಾಲಕ ನರಸಣ್ಣ(5) ಎಂದು ಗುರುತಿಸಲಾಗಿದೆ.

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿದ್ದ 9 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!