ಸುಪ್ರೀಂಕೋರ್ಟ್ ವಕೀಲೆಯ ಹತ್ಯೆ: ಪತಿಯ ಬಂಧನ
ನವದೆಹಲಿ: ಸುಪ್ರೀಂಕೋರ್ಟ್ ವಕೀಲೆಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿ ಅಜಯ್ ನಾಥ್ ಎಂಬವರನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು ಆರೋಪಿಯ ಪತ್ನಿ ರೇಣು ಸಿನ್ಹಾ (61) ಎಂದು ಗುರುತಿಸಲಾಗಿದೆ.
ರೇಣು ಸಿನ್ಹಾ ತನ್ನ ಸಹೋದರನ ಕರೆಗಳಿಗೆ ಸ್ಪಂದಿಸದ ಹಿನ್ನೆಲೆ ಆತಂಕಗೊಡು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ತನಿಖೆ ಆರಂಭಿಸಿದ ಪೊಲೀಸರು, ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಬಂಗಲೆಯಲ್ಲಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.




