ಬಂಟ್ವಾಳ: ತನ್ನ ಪತ್ನಿ ಮನೆಯಲ್ಲಿ ಪತಿ ಆತ್ಮಹತ್ಯೆ
ಉಳ್ಳಾಲ: ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಿತ್ರ ನಗರದ ನಿವಾಸಿ ರವೀಂದ್ರ (35) ಆತ್ಮಹತ್ಯೆಗೈದ ವ್ಯಕ್ತಿ ಎಂದು ಗುರುತಿಸಲಾಗಿದೆ.
ರವೀಂದ್ರ ಅವರು ಭಾನುವಾರ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮದ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನು ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಪತ್ನಿಯ ಮನೆಗೆ ವಾಪಸ್ಸಾಗಿದ್ದರು.




