ಎಂಎಲ್ಎ ಸೀಟು ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂ. ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಗ್ಯಾಂಗ್ ನಲ್ಲಿ ಗುರುತಿಸಿಕೊಂಡಿದ್ದ ಸ್ವಾಮೀಜಿ ನಾಪತ್ತೆ
ವಿಜಯನಗರ: ಎಂಎಲ್ಎ ಸೀಟು ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ವಿರುದ್ಧ ಕೇಸ್ ದಾಖಲಾಗುತ್ತಿದ್ದಂತೆ ಹಿರೇ ಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ ನಾಪತ್ತೆಯಾಗಿದ್ದಾರೆ.
ಬಿಜೆಪಿಯಿಂದ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಆರೋಪದ ಮೇರೆಗೆ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರಳನ್ನು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.
ಸಂಘಪರಿವಾರ ಸಂಘಟನೆಗಳಲ್ಲಿ ಗುರುಸಿಕೊಂಡಿರುವ ಹಾಲಶ್ರೀ ವಂಚನೆ ಪ್ರಕರಣದಲ್ಲಿ A3 ಆರೋಪಿ ಆಗಿದ್ದಾರೆ. ಬೆಳಗಿನಿಂದ ಹಾಲಶ್ರೀ ಮೊಬೈಲ್ ಆಫ್ ಇದ್ದು, ಹಾಲ ಮಠಕ್ಕೂ ಬಾರದೇ ಅಜ್ಞಾತ ಸ್ಥಳಕ್ಕೆ ಸ್ವಾಮೀಜಿ ತೆರಳಿದ್ದಾರೆ




